Home ಕರ್ನಾಟಕ ಸ್ವಾಭಿಮಾನ, ನಾಡಭಕ್ತಿಗೆ ಮತ್ತೊಂದು ಹೆಸರು ರಾಣಿ ಚನ್ನಮ್ಮ: ಸಿಎಂ ಸಿದ್ದರಾಮಯ್ಯ

ಸ್ವಾಭಿಮಾನ, ನಾಡಭಕ್ತಿಗೆ ಮತ್ತೊಂದು ಹೆಸರು ರಾಣಿ ಚನ್ನಮ್ಮ: ಸಿಎಂ ಸಿದ್ದರಾಮಯ್ಯ

0
ಸ್ವಾಭಿಮಾನ, ನಾಡಭಕ್ತಿಗೆ ಮತ್ತೊಂದು ಹೆಸರು ರಾಣಿ ಚನ್ನಮ್ಮ: ಸಿಎಂ ಸಿದ್ದರಾಮಯ್ಯ

ಬೆಂಗಳೂರು, ಅ.2: ಸ್ವಾಭಿಮಾನ, ನಾಡ ಭಕ್ತಿ ಮತ್ತು ದೇಶಭಕ್ತಿಗೆ ಮತ್ತೊಂದು ಹೆಸರೇ ಕಿತ್ತೂರಿನ ವೀರರಾಣಿ ಚನ್ನಮ್ಮ ಎಂದು ಸಿಎಂ ಸಿದ್ದರಾಮಯ್ಯ ಬಣ್ಣಿಸಿದರು. ಕಿತ್ತೂರು ಉತ್ಸವದ 200 ನೇ ವರ್ಷಾಚರಣೆ ಪ್ರಯುಕ್ತ ವಿಧಾನಸೌಧ ಮುಂದಿನ ಮೆಟ್ಟಿಲುಗಳ ಬಳಿ “ಕಿತ್ತೂರು ವಿಜಯೋತ್ಸವದ ಜ್ಯೋತಿ” ಗೆ ಚಾಲನೆ ನೀಡಿ ಅವರು ಮಾತನಾಡಿದರು. ರಾಜಧಾನಿ ಬೆಂಗಳೂರಿನಿಂದ ಹೊರಟ ವಿಜಯೋತ್ಸವ ಜ್ಯೋತಿ ರಾಜ್ಯದ ಎಲ್ಲಾ ಜಿಲ್ಲೆಗಳ ಮೂಲಕ ಸಂಚರಿಸಿ ಕಿತ್ತೂರು ತಲುಪಲಿದೆ ಎಂದರು.

ಬ್ರಿಟಿಷರ ಎದೆಯಲ್ಲಿ ನಡುಕು ಹುಟ್ಟಿಸಿ ಸಿಂಹ ಸ್ವಪ್ನವಾಗಿದ್ಜ ಶೂರ ಸಂಗೊಳ್ಳಿ ರಾಯಣ್ಣ ರಾಣಿ ಚನ್ನಮ್ಮಾಜಿ ಅವರ ಸೈನ್ಯದಲ್ಲಿದ್ದರು. ದತ್ತು ಮಕ್ಕಳಿಗೆ ಹಕ್ಕಿಲ್ಲ ಎಂಬ ಬ್ರಿಟಿಷ್ ಕಾನೂನನ್ನು ಧಿಕ್ಕರಿಸಿ ನಡೆದ ಹೋರಾಟದ ಪ್ರತಿಫಲವಾಗಿ ಇಡೀ ದೇಶದಲ್ಲೇ ಮೊಟ್ಟ ಮೊದಲ ಸ್ವಾತಂತ್ರ್ಯ ಹೋರಾಟಗಾರ್ತಿ ಎಂಬ ಖ್ಯಾತಿ ಪಡೆದು 1824 ರಿ ಅಕ್ಟೋಬರ್ 23 ರಿಂದ 25 ವರೆಗೆ ನಡೆದ ಯುದ್ದದಲ್ಲಿ ಬ್ರಿಟಿಷ್ ಅಧಿಕಾರಿ ಥ್ಯಾಕರೆ ರುಂಡ ಚೆಂಡಾಡಿದ ವಿಜಯೋತ್ಸವದ ಸವಿನೆನಪಿಗಾಗಿ ಕಿತ್ತೂರು ಉತ್ಸವ ಆಚರಿಸಲಾಗುತ್ತಿದ್ದು ಈ ಉತ್ಸವ ಕನ್ನಡಿಗರ ಸ್ವಾಭಿಮಾನದ ಉತ್ಸವ ಎಂದು ಕೊಂಡಾಡಿದರು.

ನಾಡಪ್ರೇಮ, ದೇಶಪ್ರೇಮ, ಸ್ವಾಭಿಮಾನಕ್ಕೆ ಮತ್ತೊಂದು ಹೆಸರು ರಾಣಿ ಚನ್ನಮ್ಮ. ಕಿತ್ತೂರಿನಲ್ಲಿ ಆಚರಿಸಲ್ಪಡುತ್ತಿರುವ ಕಿತ್ತೂರು ಉತ್ಸವಕ್ಕೆ ಮತ್ತು ಕಿತ್ತೂರಿನ‌ ಅಭಿವೃದ್ಧಿಗೆ ಸರ್ಕಾರ ಸಕಲ ನೆರವನ್ನು ನೀಡುತ್ತಿದೆ. ಅಗತ್ಯ ಅನುದಾನವನ್ನೂ ನೀಡುತ್ತಿದೆ. ಇಂದು ಮಹಾತ್ಮ ಗಾಂಧಿಯವರ ಜಯಂತಿ. ಜೊತೆಗೆ ಲಾಲ್ ಬಹದ್ದೂರು ಶಾಸ್ತ್ರಿ ಅವರ ಜನುಮದಿನವೂ ಹೌದು. ಗಾಂಧಿ ನಡಿಗೆ ಮೂಲಕ ಗಾಂಧಿ ತತ್ವಾದರ್ಶಗಳು ಇವತ್ತಿನ ಯುವ ಪೀಳಿಗೆಗೆ ಮಾದರಿ ಎಂದರು.

ಗಾಂಧೀಜಿಯವರು ದೇಶದ ಸ್ವಾತಂತ್ರ್ಯ ಹೋರಾಟಕ್ಕೆ ನೇತೃತ್ವ ವಹಿಸಿ ಶಾಂತಿಯುತವಾಗಿ ಸ್ವಾತಂತ್ರ್ಯ ದೊರಕಿಸಿಕೊಟ್ಟರು. 1920 ರಿಂದ 1947 ರ ವರೆಗಿನ ಸ್ವಾತಂತ್ರ್ಯ ಹೋರಾಟದ ನೇತೃತ್ವ ವಹಿಸಿದ್ದರು ಎಂದು ವಿವರಿಸಿದರು.

ಉಪ ಮುಖ್ಯಮಂತ್ರಿ ಡಿ.ಕೆ‌ಶಿವಕುಮಾರ್, ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವರಾದ ಸತೀಶ್ ಜಾರಕಿಹೊಳಿ, ಪ್ರವಾಸೋದ್ಯಮ ಇಲಾಖೆಯ ಸಚಿವರಾದ ಎಚ್.ಕೆ.ಪಾಟೀಲ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್, ಸಚಿವರಾದ ಪ್ರಿಯಾಂಕ್ ಖರ್ಗೆ, ಕಿತ್ತೂರು ಶಾಸಕರಾದ ಬಾಬಾಸಾಹೇಬ್ ಪಾಟೀಲ, ಬೆಳಗಾವಿ ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್, ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಾಹುಲ್ ಶಿಂಧೆ, ಬೈಲಹೊಂಗಲ ಉಪ ವಿಭಾಗಾಧಿಕಾರಿ ಪ್ರಭಾವತಿ ಫಕ್ಕೀರಪೂರ ಮತ್ತಿತರರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

ಕಿತ್ತೂರು ಉತ್ಸವದ ಅಂಗವಾಗಿ ರಾಜ್ಯದಾದ್ಯಂತ ಸಂಚರಿಸಲಿರುವ ಜ್ಯೋತಿಯಾತ್ರೆಯು ಅಕ್ಟೋಬರ್ 23 ರಂದು ಚನ್ನಮ್ಮನ ಕಿತ್ತೂರು ತಲುಪಲಿದೆ.

LEAVE A REPLY

Please enter your comment!
Please enter your name here