
ಬೆಳಗಾವಿ, ನವೆಂಬರ್ 18:ನಗರದಲ್ಲಿ ಜಿಲ್ಲಾಡಳಿತ ಆಯೋಜಿಸಲಾದ ದಾಸ ಶ್ರೇಷ್ಠ ಕನಕದಾಸರ ಜಯಂತಿ ಕಾರ್ಯಕ್ರಮ ಅದ್ದೂರಿಯಾಗಿ ನೆರವೇರಿತು.
ಸಾಂಸ್ಕೃತಿಕ ರೂಪಕಗಳು, ಕಲಾತಂಡಗಳು ಮೆರವಣಿಗೆಯುದ್ದಕ್ಕೂ ಸಾಗಿ ಕನಕದಾಸರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಲಾಯಿತು. ಕನಕದಾಸರ ವೇಷ ತೊಟ್ಟವರು ಈ ವೇಳೆ ಎಲ್ಲರ ಗಮನ ಸೆಳೆದರು.
ಈ ವೇಳೆ ಶಾಸಕ ಆಸೀಫ ರಾಜು ಸೇಠ್, ಜಿಲ್ಲಾಧಿಕಾರಿ ಮೊಹ್ಮದ ರೋಷನ್, ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಹಣಾಧಿಕಾರಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಅಧಿಕಾರಿಗಳು ಹಾಗೂ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು